Current AffairsLatest Updates

ವಿಮಾನ ಪತನದಲ್ಲಿ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್‌ ಪವಾರ್‌ ಸಾವು

Share With Friends

ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ವಿಮಾನ ದುರಂತ(plane crash)ದಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್‌ ಸೇರಿದಂತೆ ಐದು ಮಂದಿ ಮೃತಪಟ್ಟಿದ್ದಾರೆ. ಅಜಿತ್‌ ಪರವಾರ್‌ ಸೇರಿದಂತೆ 5 ಸಿಬ್ಬಂದಿಗಳನ್ನು ವಿಮಾನ ಹೊತ್ತೊಯ್ಯುತ್ತಿತ್ತುಎಂದು ತಿಳಿಸಲಾಗಿದೆ. ಮುಂಬೈನಿಂದ ಬಾರಾಮತಿಗೆ ವಿಮಾನ ತೆರಳುತ್ತಿದ್ದ. ಏರ್‌ಕ್ರಾಫ್ಟ್‌ ಲ್ಯಾಂಡಿಂಗ್‌ ಆಗುವ ವೇಳೆ ಬಾರಾಮತಿಯ ಹೊಲದಲ್ಲಿ ಅಪಘಾತಕ್ಕೆ ಈಡಾಗಿದೆ ಎಂದು ಡಿಜಿಸಿಎ ತಿಳಿಸಿದೆ.

ಮುಂಬೈನಿಂದ ಬೆಳಗ್ಗೆ 8.10ಕ್ಕೆ ವಿಮಾನ ಬಾರಾಮತಿ ಕಡೆ ಪ್ರಯಾಣ ಮಾಡಿತ್ತು. ಇನ್ನೇನು ಬಾರಾಮತಿಯಲ್ಲಿ ಲ್ಯಾಂಡಿಂಗ್‌ ಆಗಬೇಕು ಎನ್ನುವಾಗ ಈ ಅಪಘಾತ ಸಂಭವಿಸಿದೆ. 45XR ಮಾದರಿಯ ಸಣ್ಣ ಏರ್‌ಕ್ರಾಫ್ಟ್‌ ಇದಾಗಿದ್ದು, ಬೆಳಗ್ಗೆ 8.10ಕ್ಕೆ ಮುಂಬೈನಿಂದ ಹೊರಟಿತ್ತು. ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮುನ್ನ ಪವಾರ್ ನಾಲ್ಕು ಪ್ರಮುಖ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಬೇಕಿತ್ತು.

ಲಿಯರ್‌ಜೆಟ್ 45 ವಿಮಾನ ಮುಂಬೈನಿಂದ ಹಾರಾಟ ಆರಂಭಿಸಿದ ಒಂದು ಗಂಟೆಯ ನಂತರ ಲ್ಯಾಂಡಿಂಗ್ ಸಮಯದಲ್ಲಿ ನಿಯಂತ್ರಣ ಕಳೆದುಕೊಂಡಿದೆ ಎಂದು ವರದಿಯಾಗಿದೆ. ಜಿಲ್ಲಾ ಪರಿಷತ್‌ಗಳು ಮತ್ತು ಪಂಚಾಯತ್ ಸಮಿತಿಗಳಿಗೆ ನಡೆಯುತ್ತಿರುವ ಚುನಾವಣೆಗಳ ಮಧ್ಯೆ, ಪವಾರ್ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲು ಮುಂಬೈನಿಂದ ಬಾರಾಮತಿಗೆ ಪ್ರಯಾಣಿಸುತ್ತಿದ್ದರು.

ಅಜಿತ್ ಪವಾರ್ ರಾಜಕೀಯ ಜೀವನ :

2025 ರ ವಿಧಾನಸಭಾ ಚುನಾವಣೆಯಲ್ಲಿ, ಅವರು ಯುಗೇಂದ್ರ ಪವಾರ್ ಅವರನ್ನು ಸೋಲಿಸಿ ಗೆದ್ದಿದ್ದರು. ಇದಕ್ಕೂ ಮೊದಲು, ಅಜಿತ್ ಪವಾರ್ ಮಹಾರಾಷ್ಟ್ರ ರಾಜಕೀಯದಲ್ಲಿ ಅತ್ಯಂತ ಶಕ್ತಿಶಾಲಿ ರಾಜಕಾರಣಿಗಳಲ್ಲಿ ಒಬ್ಬರಾಗಿದ್ದರು. ಅವರು ಹಲವು ಬಾರಿ ಉಪಮುಖ್ಯಮಂತ್ರಿ ಹುದ್ದೆಯ ದಾಖಲೆಯನ್ನು ಹೊಂದಿದ್ದರೂ, ಅವರು ಎಂದಿಗೂ ಮುಖ್ಯಮಂತ್ರಿ ಸ್ಥಾನಕ್ಕೇರಲೇ ಇಲ್ಲ.

ಅಜಿತ್ ಪವಾರ್ ಎನ್‌ಸಿಪಿಯ ಹಿರಿಯ ನಾಯಕ ಮತ್ತು ಮಹಾರಾಷ್ಟ್ರ ಸರ್ಕಾರದಲ್ಲಿ ಉಪಮುಖ್ಯಮಂತ್ರಿ. ಅವರು ಶರದ್ ಪವಾರ್ ಅವರ ತಮ್ಮನ ಮಗ ಮತ್ತು ಇತ್ತೀಚಿನ ವರ್ಷಗಳಲ್ಲಿ ಪಕ್ಷದೊಳಗಿನ ಒಡಕಿನ ನಂತರ ತಮ್ಮದೇ ಆದ ಬಣವನ್ನು ಮುನ್ನಡೆಸುತ್ತಿದ್ದಾರೆ. ಈ ಅಪಘಾತವು ರಾಜಕೀಯ ವಲಯಗಳಲ್ಲಿ ಕೋಲಾಹಲಕ್ಕೆ ಕಾರಣವಾಗಿದೆ.

2022 ರಲ್ಲಿ, ಬಾಳಾಸಾಹೇಬ್ ಠಾಕ್ರೆ ಸ್ಥಾಪಿಸಿದ ಶಿವಸೇನೆ ಪಕ್ಷವು ಎರಡು ಬಣಗಳಾಗಿ ವಿಭಜನೆಯಾಯಿತು ಮತ್ತು ಈಗ ಭಾರತೀಯ ರಾಜಕೀಯದ ಚಾಣಕ್ಯ ಎಂದು ಕರೆಯಲ್ಪಡುವ ಶರದ್ ಪವಾರ್ ಅವರ ಪಕ್ಷವು ವಿಭಜನೆಯಾಗಿದೆ. ಶರದ್ ಪವಾರ್ ಜೂನ್ 10, 1999 ರಂದು ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷವನ್ನು ಸ್ಥಾಪಿಸಿದರು.

ಪಿಎ ಸಂಗ್ಮಾ ಮತ್ತು ತಾರಿಕ್ ಅನ್ವರ್ ಅವರಂತಹ ನಾಯಕರು ಪಕ್ಷಕ್ಕೆ ಸೇರಿದರು. ಶರದ್ ಪವಾರ್ ಅವರ ಕುಟುಂಬ ಯಾವಾಗಲೂ ಅವರ ಬೆಂಬಲಕ್ಕೆ ನಿಂತಿದೆ. ಶರದ್ ಪವಾರ್ ಅವರ ತಮ್ಮನ ಮಗ ಅಜಿತ್ ಪವಾರ್ ಕೂಡ ತಮ್ಮ ಚಿಕ್ಕಪ್ಪನನ್ನು ಬೆಂಬಲಿಸಲು ಎನ್‌ಸಿಪಿ ಸೇರಿದರು.

ಎನ್​ಡಿಎ ಜೊತೆ ಮೈತ್ರಿ :
ಅಜಿತ್ ಪವಾರ್ ತಮ್ಮ ರಾಜಕೀಯ ಚಾಣಾಕ್ಷತನದ ಮೂಲಕ ಮಹಾರಾಷ್ಟ್ರದಲ್ಲಿ ಪಕ್ಷವನ್ನು ಬಲಪಡಿಸಿದರು. ಆದರೆ, ಆದರೆ ಅವರು ತನ್ನ ಚಿಕ್ಕಪ್ಪನನ್ನು ಬಿಟ್ಟು, ಎನ್‌ಸಿಪಿಯನ್ನು ತೊರೆದು ಎನ್‌ಡಿಎ ಅಂದರೆ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟಕ್ಕೆ ಸೇರಿದ್ದರು. ಅವರು ಎಂಟು ಎನ್‌ಸಿಪಿ ಶಾಸಕರೊಂದಿಗೆ ಬಿಜೆಪಿ-ಶಿಂಧೆ ಬಣವನ್ನು ಸೇರಿದರು . ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯೂ ಆದರು. ಅವರ ವಿರುದ್ಧದ ದಂಗೆಗೆ ಹಲವು ಕಾರಣಗಳಿವೆ.

ವರ್ಷಗಳ ಕಠಿಣ ಪರಿಶ್ರಮದ ನಂತರ, ಅವರು ಮಹಾರಾಷ್ಟ್ರ ರಾಜಕೀಯದಲ್ಲಿ ಬಲವಾದ ನೆಲೆಯನ್ನು ಸ್ಥಾಪಿಸಿದರು. 1995 ರಲ್ಲಿ, ಅವರು ಮೊದಲು ಪುಣೆ ಜಿಲ್ಲೆಯ ಬಾರಾಮತಿ ವಿಧಾನಸಭಾ ಕ್ಷೇತ್ರದಿಂದ ಮಹಾರಾಷ್ಟ್ರ ವಿಧಾನಸಭೆಯ (ಎಂಎಲ್ಎ) ಸದಸ್ಯರಾದರು. ಅಂದಿನಿಂದ ಅವರು ನಿರಂತರವಾಗಿ ಈ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ. 1995, 1999, 2004, 2009, 2014 ಮತ್ತು 2019 ರಲ್ಲಿ ಅವರು ಶಾಸಕ ಚುನಾವಣೆಯಲ್ಲಿ ಗೆದ್ದರು.

ಸಚಿವರಾಗಿ ದೀರ್ಘ ಅನುಭವ ಹೊಂದಿದ್ದಾರೆ. ಅವರು ಮಹಾರಾಷ್ಟ್ರ ಸರ್ಕಾರದಲ್ಲಿ ಹಲವಾರು ಪ್ರಮುಖ ಸಚಿವ ಸ್ಥಾನಗಳನ್ನು ಅಲಂಕರಿಸಿದ್ದಾರೆ. ಅವರು ರಾಜ್ಯ ಸರ್ಕಾರದಲ್ಲಿ ಕೃಷಿ, ಇಂಧನ ಮತ್ತು ಯೋಜನಾ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದರು. ಸುಧಾಕರ್ ನಾಯಕ್ ಅವರ ಸರ್ಕಾರದಲ್ಲಿ ಅವರು ಕೃಷಿ ಮತ್ತು ವಿದ್ಯುತ್ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದರು. ನಂತರ ಅವರ ಚಿಕ್ಕಪ್ಪ ಶರದ್ ಪವಾರ್ 1992 ಮತ್ತು 1993 ರಲ್ಲಿ ಮುಖ್ಯಮಂತ್ರಿಯಾದಾಗ ಅವರನ್ನು ಸಚಿವರನ್ನಾಗಿ ನೇಮಿಸಲಾಯಿತು.

ನಂತರ, 1999 ರಲ್ಲಿ ಕಾಂಗ್ರೆಸ್ ಮತ್ತು ಎನ್‌ಸಿಪಿ ಅಧಿಕಾರಕ್ಕೆ ಬಂದಾಗ, ಅವರನ್ನು ವಿಲಾಸ್‌ರಾವ್ ದೇಶಮುಖ್ ಅವರ ಸರ್ಕಾರದಲ್ಲಿ ನೀರಾವರಿ ಸಚಿವರನ್ನಾಗಿ ನೇಮಿಸಲಾಯಿತು. 2003-2004ರಲ್ಲಿ, ಅವರಿಗೆ ಸುಶೀಲ್ ಕುಮಾರ್ ಶಿಂಧೆ ಅವರ ಸರ್ಕಾರದಲ್ಲಿ ಗ್ರಾಮೀಣಾಭಿವೃದ್ಧಿಯ ಹೆಚ್ಚುವರಿ ಜವಾಬ್ದಾರಿಯನ್ನು ನೀಡಲಾಯಿತು.

ಅವರು ಒಂದೇ ವರ್ಷದಲ್ಲಿ ಎರಡು ಬಾರಿ ಉಪಮುಖ್ಯಮಂತ್ರಿಯಾದಾಗ 2019 ರಿಂದ ಅಜಿತ್ ಪವಾರ್ ಅವರ ರಾಜಕೀಯ ಜೀವನವು ಸಾಕಷ್ಟು ಆಸಕ್ತಿದಾಯಕವಾಗಿದೆ . 2019 ರಲ್ಲಿ ಅವರು ಇಬ್ಬರು ವಿಭಿನ್ನ ಮುಖ್ಯಮಂತ್ರಿಗಳ ಅಡಿಯಲ್ಲಿ ಉಪಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದರು. ನವೆಂಬರ್ 23 ರ ಬೆಳಗ್ಗೆ, ಅವರು ದೇವೇಂದ್ರ ಫಡ್ನವೀಸ್ ಅವರೊಂದಿಗೆ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಆದಾಗ್ಯೂ, ಫಡ್ನವೀಸ್ ಸದನದಲ್ಲಿ ತಮ್ಮ ಬಹುಮತವನ್ನು ಸಾಬೀತುಪಡಿಸುವಲ್ಲಿ ವಿಫಲರಾದರು. ಉದ್ಧವ್ ಠಾಕ್ರೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ, ಅವರನ್ನು ಮತ್ತೊಮ್ಮೆ ಉಪಮುಖ್ಯಮಂತ್ರಿಯಾಗಿ ನೇಮಿಸಲಾಯಿತು. ಈಗ, 2023 ರಲ್ಲಿ, ಅವರು ಮತ್ತೊಮ್ಮೆ ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಲಿದ್ದಾರೆ. ಅವರು ಇಲ್ಲಿಯವರೆಗೆ ಐದು ಬಾರಿ ಉಪಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ.

ಅಜಿತ್ ಪವಾರ್ ಮೊದಲು ನವೆಂಬರ್ 2010 ರಲ್ಲಿ ಉಪಮುಖ್ಯಮಂತ್ರಿಯಾದರು. ನಂತರ 2010 ರಲ್ಲಿ ಎರಡನೇ ಬಾರಿಗೆ ಉಪಮುಖ್ಯಮಂತ್ರಿಯಾದರು. ಅವರ ವೈಯಕ್ತಿಕ ಜೀವನದ ಬಗ್ಗೆ ಹೇಳುವುದಾದರೆ, ಅವರ ಪತ್ನಿಯ ಹೆಸರು ಸುನೇತ್ರಾ ಪವಾರ್. ಅವರು ಮಹಾರಾಷ್ಟ್ರದ ಮಾಜಿ ಸಚಿವ ಪದಮ್ ಸಿಂಗ್ ಪಾಟೀಲ್ ಅವರ ಸಹೋದರಿ. ಅಜಿತ್ ಪವಾರ್ ಮತ್ತು ಸುನೇತ್ರಾ ಪವಾರ್ ಅವರಿಗೆ ಜೈ ಪವಾರ್ ಮತ್ತು ಪಾರ್ಥ್ ಪವಾರ್ ಎಂಬ ಇಬ್ಬರು ಗಂಡು ಮಕ್ಕಳಿದ್ದಾರೆ.

ಅಜಿತ್ ಪವಾರ್ ಅವರ ರಾಜಕೀಯ ಜೀವನವು ನಾಲ್ಕು ದಶಕಗಳಿಗೂ ಹೆಚ್ಚು ಕಾಲ ನಡೆಯಿತು, ಮಹಾರಾಷ್ಟ್ರದ ಆಡಳಿತ ಮತ್ತು ಅಭಿವೃದ್ಧಿಗೆ, ವಿಶೇಷವಾಗಿ ಬಾರಾಮತಿ ಪ್ರದೇಶದ ಅಭಿವೃದ್ಧಿಗೆ ಅವರು ನೀಡಿದ ಮಹತ್ವದ ಕೊಡುಗೆಗಳಿಂದ ಗುರುತಿಸಲ್ಪಟ್ಟಿದೆ.


author avatar
spardhatimes
error: Content Copyright protected !!