Team India : ಚಾಂಪಿಯನ್ಸ್ ಟ್ರೋಫಿ ಗೆದ್ದ ಟೀಮ್ ಇಂಡಿಯಾಗೆ 58 ಕೋಟಿ ರೂ. ಗಳ ನಗದು ಬಹುಮಾನ ಘೋಷಣೆ
BCCI announces Rs 58 crore cash reward for Team India : ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ಗೆದ್ದ(Champions Trophy BCCI Reward) ರೋಹಿತ್ ಶರ್ಮ ನಾಯಕತ್ವದ ಟೀಂ ಇಂಡಿಯಾಗೆ ಬಿಸಿಸಿಐ(BCCI Cash Prize for Team India) 58 ಕೋಟಿ ರೂ. ಗಳ ನಗದು ಬಹುಮಾನ ಘೋಷಣೆ ಮಾಡಿದೆ. ಮಾರ್ಚ್ 9 ರಂದು ದುಬೈನಲ್ಲಿ ನಡೆದಿದ್ದ ಫೈನಲ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ 4 ವಿಕೆಟ್ ಅಂತರದಿಂದ ಗೆದ್ದು ಮೂರನೇ ಬಾರಿಗೆ ಟ್ರೋಫಿ ಎತ್ತಿ ಹಿಡಿದಿತ್ತು.
ಐಸಿಸಿಯ ಬಹುಮಾನ ಮೊತ್ತವಾಗಿ ಚಾಂಪಿಯನ್ ಭಾರತ 19.45 ಕೋಟಿ ರೂ. ಪಡೆದರೆ ರನ್ನರ್ಅಪ್ ನ್ಯೂಜಿಲ್ಯಾಂಡ್ ತಂಡಕ್ಕೆ 9.72 ಕೋಟಿ ರೂ. (.12 ಮಿಲಿಯನ್ ಡಾಲರ್ ) ಲಭಿಸಿತ್ತು. ಕಳೆದ ವರ್ಷ ಬಾರ್ಬಡೋಸ್ನಲ್ಲಿ ನಡೆದ ಟಿ20 ವಿಶ್ವಕಪ್ ಗೆಲುವಿನ ನಂತರ, ಟೀಮ್ ಇಂಡಿಯಾಕ್ಕೆ ಬಿಸಿಸಿಐ 125 ಕೋಟಿ ರೂ.ಗಳ ಬೃಹತ್ ಬಹುಮಾನ ನೀಡಿ ಘೋಷಿಸಿತ್ತು. ಆಟಗಾರರಿಗೆ ಮಾತ್ರವಲ್ಲದೆ ತಂಡ ಸಿಬ್ಬಂದಿಗಳಿಗೂ ಬಹುಮಾನ ಮೊತ್ತ ನೀಡಲಾಗಿತ್ತು.
ಧೋನಿಗೆ ಪ್ರತಿ ತಿಂಗಳು 70 ಸಾವಿರ ರೂ. :
ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿರುವ ಮಹೇಂದ್ರ ಸಿಂಗ್ ಧೋನಿ ಬಿಸಿನೆಸ್ ಹಾಗೂ ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಹೀಗಾಗಿ ಐಪಿಎಲ್ ನಿವೃತ್ತಿ ಬಳಿಕವೂ ಅದರಲ್ಲೇ ಮುಂದುವರೆಯಲಿದ್ದಾರೆ. ಅಷ್ಟೇ ಅಲ್ಲದೆ ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತರಾಗಿರುವ ಧೋನಿ 2021 ರಿಂದ ಬಿಸಿಸಿಐ ಕಡೆಯಿಂದ ಪಿಂಚಣಿ ಪಡೆಯುತ್ತಿದ್ದಾರೆ.
ಟೀಮ್ ಇಂಡಿಯಾ ಪರ ಆಡಿದ ಆಟಗಾರರಿಗೆ ಬಿಸಿಸಿಐ ವಿವಿಧ ಹಂತಗಳ ಆಧಾರ ಮೇಲೆ ಪಿಂಚಣಿ ಮೊತ್ತವನ್ನು ಪಾವತಿಸುತ್ತಿದೆ. ಇಲ್ಲಿ ಭಾರತದ ಪರ 75 ಕ್ಕೂ ಹೆಚ್ಚು ಟೆಸ್ಟ್ ಅಥವಾ 50 ಕ್ಕೂ ಹೆಚ್ಚು ಏಕದಿನ ಪಂದ್ಯಗಳನ್ನು ಆಡಿದ ಮತ್ತು ಟೀಮ್ ಇಂಡಿಯಾದ ಗಮನಾರ್ಹ ವಿಜಯಗಳಿಗೆ ಕಾರಣರಾದ ಕ್ರಿಕೆಟಿಗರಿಗೆ 70,000 ರೂ.ಗಳ ಪಿಂಚಣಿಯನ್ನು ನೀಡಲಾಗುತ್ತಿದೆ.
ಮಹೇಂದ್ರ ಸಿಂಗ್ ಧೋನಿ ತಮ್ಮ ಅಂತರರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನದಲ್ಲಿ 90 ಟೆಸ್ಟ್, 350 ಏಕದಿನ ಮತ್ತು 98 ಟಿ20 ಪಂದ್ಯಗಳನ್ನು ಆಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಬಿಸಿಸಿಐನಿಂದ ತಿಂಗಳಿಗೆ 70,000 ರೂ.ಗಳವರೆಗೆ ಪಿಂಚಣಿ ನೀಡುತ್ತಿದೆ.
ಹಾಗೆಯೇ ಸಚಿನ್ ತೆಂಡೂಲ್ಕರ್ ಮತ್ತು ಸುನಿಲ್ ಗವಾಸ್ಕರ್ ಅವರಿಗೂ ಕೂಡ ಮಾಸಿಕ 70,000 ರೂ. ಪಿಂಚಣಿ ಮೊತ್ತ ಪಡೆಯುತ್ತಿದ್ದಾರೆ. ಇನ್ನು ಯುವರಾಜ್ ಸಿಂಗ್ ಅವರಿಗೆ 60,000 ಮತ್ತು ಆರ್ಥಿಕವಾಗಿ ತೊಂದರೆಯಲ್ಲಿರುವ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳೆ ಅವರಿಗೆ 30,000 ಪಿಂಚಣಿ ಮೊತ್ತವನ್ನು ಪಾವತಿಸಲಾಗುತ್ತಿದೆ.
ಇತ್ತ ಮಾಸಿಕ 70 ಸಾವಿರ ರೂ. ಪಿಂಚಣಿ ಮೊತ್ತದ ಹೊರತಾಗಿಯೂ ಮಹೇಂದ್ರ ಸಿಂಗ್ ಧೋನಿ ಆರ್ಥಿಕವಾಗಿ ಸದೃಢರಾಗಿದ್ದಾರೆ. ಏಕೆಂದರೆ 2023-24 ರಲ್ಲಿ ಧೋನಿ 38 ಕೋಟಿ ರೂ. ತೆರಿಗೆ ಪಾವತಿಸಿದ್ದಾರೆ ಎಂಬುದು ಇಲ್ಲಿ ಉಲ್ಲೇಖಾರ್ಹ.
ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದ ಹೈಲೈಟ್ಸ್ :
ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ನ್ಯೂಜಿಲೆಂಡ್ ಬ್ಯಾಟಿಂಗ್ ಡೆರಿಲ್ ಮಿಚೆಲ್ (63 ರನ್, 101 ಎಸೆತ, 3 ಬೌಂಡರಿ) ಹಾಗೂ ಮಿಚೆಲ್ ಬ್ರೇಸ್ವೆಲ್ (53* ರನ್, 40 ಎಸೆತ, 3 ಬೌಂಡರಿ, 2 ಸಿಕ್ಸರ್) ಅರ್ಧಶತಕಗಳ ನೆರವಿನಿಂದ ನಿಗದಿತ 50 ಓವರ್ಗಳಲ್ಲಿ 7 ವಿಕೆಟ್ಗೆ 251 ರನ್ಗಳ ಮೊತ್ತ ಕಲೆಹಾಕಿತ್ತು.
ಚೇಸಿಂಗ್ ವೇಳೆ ರೋಹಿತ್ ಶರ್ಮ ಹಾಗೂ ಶುಭಮಾನ್ ಗಿಲ್ (31) ಒದಗಿಸಿದ ಬಿರುಸಿನ ಆರಂಭ ಪಡೆಯಿತು. ಕೊಹ್ಲಿ(1) ವಿಫಲರಾದರು. ಶ್ರೇಯಸ್ ಅಯ್ಯರ್ (48 ರನ್, 62 ಎಸೆತ, 2 ಬೌಂಡರಿ, 2 ಸಿಕ್ಸರ್) ಹಾಗೂ ಆಲ್ರೌಂಡರ್ ಅಕ್ಷರ್ ಪಟೇಲ್ (29) ಸಣ್ಣ ಬ್ಯಾಟಿಂಗ್ ಹೋರಾಟ ನಡೆಸಿದರು. ಕೊನೆಯಲ್ಲಿ ಕನ್ನಡಿಗ ಕೆ.ಎಲ್ ರಾಹುಲ್ (34* ರನ್, 33 ಎಸೆತ, 1 ಬೌಂಡರಿ, 1 ಸಿಕ್ಸರ್) ಉಪಯುಕ್ತ ಆಟದ ನೆರವಿನಿಂದ 49 ಓವರ್ಗಳಲ್ಲಿ 6 ವಿಕೆಟ್ಗೆ 254 ಭಾರತಕ್ಕೆ ಗೆಲುವು ತಂದುಕೊಟ್ಟಿದ್ದರು.
ಭಾರತದ ಗೆಲುವಿನಲ್ಲಿ ನಾಯಕ ರೋಹಿತ್ ಶರ್ಮ (76 ರನ್, 83 ಎಸೆತ, 7 ಬೌಂಡರಿ, 3 ಸಿಕ್ಸರ್) ಬಿರುಸಿನ ಆಟ ಹಾಗೂ ನಾಲ್ವರು ಸ್ಪಿನ್ನರ್ಗಳ ಬಿಗಿ ಬೌಲಿಂಗ್ ದಾಳಿ ಮತ್ತು ಕೊನೆಯ ಹಂತದಲ್ಲಿ ಕನ್ನಡಿಗ ಕೆ.ಎಲ್ ರಾಹುಲ್ ಅವರ ಜವಾಬ್ದಾರಿಯುತ ಬ್ಯಾಟಿಂಗ್ ಪ್ರಮುಖವಾಗಿತ್ತು.