GKAwardsLatest Updates

ಭಾರತ ರತ್ನ ಪ್ರಶಸ್ತಿ ಪುರಸ್ಕೃತರ ಪಟ್ಟಿ

Share With Friends

ಭಾರತ ರತ್ನ ಭಾರತದ ನಾಗರಿಕರಿಗೆ ದೊರೆಯಬಹುದಾದ ಅತ್ಯುನ್ನತ ಪ್ರಶಸ್ತಿ. ಭಾರತ ರತ್ನ ಪ್ರಶಸ್ತಿಯನ್ನು ಕಲೆ, ಸಾಹಿತ್ಯ, ವಿಜ್ಞಾನ, ಸಾರ್ವಜನಿಕ ಸೇವೆ ಮತ್ತಿತರ ಕ್ಷೇತ್ರಗಳಲ್ಲಿ ಅತಿ ದೊಡ್ಡ ಸಾಧನೆಗಳನ್ನು ತೋರಿದ ಗಣ್ಯರಿಗೆ ನೀಡಲಾಗುತ್ತದೆ. ಈ ಪ್ರಶಸ್ತಿಯನ್ನು 1954 ರಲ್ಲಿ ಆರಂಭಿಸಲಾಯಿತು. ಆಗ ಈ ಪ್ರಶಸ್ತಿಯನ್ನು ಯಾರಿಗೂ ಮರಣಾನಂತರ ಪ್ರಧಾನ ಮಾಡುವ ಉದ್ದೇಶವಿರಲಿಲ್ಲ.

ಮಹಾತ್ಮ ಗಾಂಧಿಯವರಿಗೆ ಈ ಪ್ರಶಸ್ತಿ ದೊರಕದ್ದಕ್ಕೆ ಪ್ರಮುಖ ಕಾರಣ ಇದೇ ಇದ್ದೀತು. 1966ರ ನಂತರ ಮರಣಾನಂತರವೂ ಈ ಪ್ರಶಸ್ತಿಯನ್ನು ಪ್ರದಾನ ಮಾಡಲು ಅವಕಾಶ ಸೃಷ್ಟಿಯಾಯಿತು (ಇದುವರೆಗೆ ಒಟ್ಟು ಹದಿನಾಲ್ಕು ವ್ಯಕ್ತಿಗಳಿಗೆ ಅವರ ಮರಣಾನಂತರ ಭಾರತ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ).

ಭಾರತ ರತ್ನ ಪ್ರಶಸ್ತಿಯನ್ನು ಪಡೆಯುವ ವ್ಯಕ್ತಿ ಭಾರತೀಯ ನಾಗರಿಕರಾಗಿರಬೇಕೆಂಬ ನಿಯಮವೇನಿಲ್ಲದಿದ್ದರೂ ಸಾಮಾನ್ಯವಾಗಿ ಇದನ್ನು ಪಾಲಿಸಲಾಗುತ್ತದೆ. ಭಾರತೀಯ ನಾಗರಿಕರಲ್ಲದಿದ್ದರೂ ಈ ಪ್ರಶಸ್ತಿಯನ್ನು ಪಡೆದ ಇಬ್ಬರೇ ವ್ಯಕ್ತಿಗಳೆಂದರೆ ನೆಲ್ಸನ್ ಮಂಡೇಲಾ (1990 ರಲ್ಲಿ) ಮತ್ತು ಖಾನ್ ಅಬ್ದುಲ್ ಗಫಾರ್ ಖಾನ್ (1987 ರಲ್ಲಿ).

ಪ್ರಶಸ್ತಿ ಪದಕದ ಮೊದಲ ವಿನ್ಯಾಸದಂತೆ ವೃತ್ತಾಕಾರದ ಚಿನ್ನದ ಪದಕದ ಮೇಲೆ ಸೂರ್ಯನ ಚಿತ್ರ ಮತ್ತು ದೇವನಾಗರಿ ಲಿಪಿಯಲ್ಲಿ “ಭಾರತ ರತ್ನ”, ಮತ್ತು ಹಿಂಭಾಗದಲ್ಲಿ ಭಾರತದ ರಾಷ್ಟ್ರೀಯ ಚಿಹ್ನೆ ಮತ್ತು “ಸತ್ಯಮೇವ ಜಯತೇ” ಎಂದು ಬರೆಯಬೇಕೆಂದಿದ್ದಿತು. ಈ ವಿನ್ಯಾಸದ ಯಾವುದೇ ಪದಕವನ್ನು ಉಪಯೋಗಿಸಲಾಗಿಲ್ಲ. ಮುಂದಿನ ವರ್ಷವೇ ಪದಕದ ವಿನ್ಯಾಸವನ್ನು ಈಗಿನ ವಿನ್ಯಾಸಕ್ಕೆ ಬದಲಾಯಿಸಲಾಯಿತು.

➤ ಪ್ರಶಸ್ತಿಗೆ ಭಾಜನರಾದ ವರ್ಷ ಪುರಸ್ಕೃತರ ಹೆಸರು ಮತ್ತು ಅವರ ರಾಜ್ಯ/ ದೇಶ
1) 1954- ಎಸ್ ರಾಧಾಕೃಷ್ಣನ್ -ಆಂಧ್ರಪ್ರದೇಶ
2) 1954- ಸಿ.ರಾಜಗೋಪಾಲಚಾರಿ – ತಮಿಳುನಾಡು
3) 1954- ಡಾ.ಸಿ.ವ್ಹಿ.ರಾಮನ್ – ತಮಿಳುನಾಡು

4) 1955- ಭಗವಾನದಾಸ – ಉತ್ತರ ಪ್ರದೇಶ
5) 1955- ಸರ್.ಎಮ್.ವಿಶ್ವೇಶ್ವರಯ್ಯ – ಕರ್ನಾಟಕ
6) 1955- ಜವಾಹರಲಾಲ್ ನೆಹರು – ಉತ್ತರ ಪ್ರದೇಶ

7) 1957- ಪಂ.ಗೋ.ವಲ್ಲಭಿ ಪಂಥ – ಉತ್ತರ ಪ್ರದೇಶ
8) 1958- ಧೊಂಡೊ ಕೇಶವ ಕರ್ವೆ – ಮಹಾರಾಷ್ಟ್ರ

9)     1961- ಬಿಧಾನ್‌ ಚಂದ್ರ ರಾಯ್‌ – ಪಶ್ಚಿಮ ಬಂಗಾಳ
10) 1961- ಪುರುಷೋತ್ತಮದಾಸ ಟಂಡನ್ – ಉತ್ತರ ಪ್ರದೇಶ

11) 1962- ಡಾ.ರಾಜೇಂದ್ರ ಪ್ರಸಾದ್ – ಬಿಹಾರ

12) 1963- ಜಾಕೀರ್ ಹುಸೇನ್ – ಉತ್ತರ ಪ್ರದೇಶ
13) 1963- ಡಾ.ಪಾಂಡುರಂಗ ವಾಮನ ಕಾಣೆ – ಮಹಾರಾಷ್ಟ್ರ

14) 1966- ಲಾಲ್ ಬಹಾದ್ದೂರ ಶಾಸ್ತ್ರೀ – ಉತ್ತರ ಪ್ರದೇಶ
15) 1971- ಇಂದಿರಾಗಾಂಧಿ – ಉತ್ತರ ಪ್ರದೇಶ
16) 1975- ವ್ಹಿ.ವ್ಹಿ.ಗಿರಿ – ಒಡಿಶಾ
17) 1976- ಕೆ.ಕಾಮರಾಜ್ – ತಮಿಳುನಾಡು
18) 1980- ಮಧರ್ ಥೆರಿಸಾ -ಪಶ್ಚಿಮ ಬಂಗಾಳ (ಉತ್ತರ ಮ್ಯಾಸಿಡೋನಿಯಾ)
19) 1983- ವಿನೋಬಾ ಭಾವೆ – ಮಹಾರಾಷ್ಟ್ರ
20) 1987- ಖಾನ್ ಅಬ್ದಲ್ ಗಫಾರಖಾನ್ – ಪಾಕಿಸ್ತಾನ
21) 1988- ಎಂ.ಜಿ.ರಾಮಚಂದ್ರನ್ – ತಮಿಳುನಾಡು

22) 1990- ಡಾ.ಅಂಬೇಡ್ಕರ್ – ಮಹಾರಾಷ್ಟ್ರ
23) 1990- ನೆಲ್ಸನ್ ಮಂಡೇಲಾ – ದಕ್ಷಿಣ ಆಫ್ರಿಕಾ

24) 1991- ಮೊರಾರ್ಜಿ ದೇಸಾಯಿಯ – ಗುಜರಾತ್
25) 1991- ರಾಜೀವ್ ಗಾಂಧೀ – ಉತ್ತರ ಪ್ರದೇಶ
26) 1991- ಸರ್ದಾರ್ ಪಟೇಲ್ – ಗುಜರಾತ್

27) 1992- ಜೆ.ಆರ್.ಡಿ.ಟಾಟಾ – ಮಹಾರಾಷ್ಟ್ರ
28) 1992- ಮೌಲಾನಾ ಅಬ್ದುಲ್ ಕಲಾಂ ಆಜಾದ್ – ಪಶ್ಚಿಮ ಬಂಗಾಳ
29) 1992- ಸತ್ಯಜಿತ್ ರೇ – ಪಶ್ಚಿಮ ಬಂಗಾಳ

30) 1997- ಗುಲ್ಜಾರಿಲಾಲ್ ನಂದಾ – ಪಂಜಾಬ್
31) 1997- ಅರುಣಾ ಅಸಫ್ ಅಲಿ – ಪಶ್ಚಿಮ ಬಂಗಾಳ
32) 1997- ಎ.ಪಿ.ಜೆ.ಅಬ್ದುಲ್ ಕಲಾಂ – ತಮಿಳುನಾಡು

33) 1998- ಎಂ.ಎಸ್.ಸುಬ್ಬುಲಕ್ಷ್ಮಿ – ತಮಿಳುನಾಡು
34) 1998- ಸಿ. ಸುಬ್ರಹ್ಮಣ್ಯಂ – ತಮಿಳುನಾಡು

35) 1999- ಜಯಪ್ರಕಾಶ ನಾರಾಯಣ – ಬಿಹಾರ
36) 1999- ಅಮರ್ತ್ಯಸೇನ್ – ಪಶ್ಚಿಮ ಬಂಗಾಳ
37) 1999- ರವಿಶಂಕರ್ – ಶ್ಚಿಮ ಬಂಗಾಳ
38) 1999- ಗೋಪಿನಾಥ್ ಬೋರ್ಡೊಲೋಯಿ – ಅಸ್ಸಾಂ

39) 2001- ಉ.ಬಿಸ್ಮಲ್ಲಾಖಾನ್ -ಉತ್ತರ ಪ್ರದೇಶ
40) 2001- ಲತಾ ಮಂಗೇಶ್ಕರ್ -ಮಹಾರಾಷ್ಟ್ರ

41) 2008- ಭೀಮಸೇನ ಜೋಶಿ – ಕರ್ನಾಟಕ

42) 2013- ಸಚಿನ್ ತೆಂಡೂಲ್ಕರ್ – ಮಹಾರಾಷ್ಟ್ರ
43) 2013- ಸಿ.ಎನ್.ಆರ್.ರಾವ್ – ಕರ್ನಾಟಕ

44) 2015- ಮದನ ಮೋಹನ ಮಾಳ್ವೀಯಾ – ಉತ್ತರ ಪ್ರದೇಶ
45) 2015- ಅಟಲ ಬಿಹಾರಿ ವಾಜಪೇಯಿ – ಮಧ್ಯಪ್ರದೇಶ

46) 2019- ಪ್ರಣಬ್ ಮುಖರ್ಜಿ – ಪಶ್ಚಿಮ ಬಂಗಾಳ
47) 2019 – ಭೂಪೇನ್ ಹಜಾರಿಕಾ – ಅಸ್ಸಾಂ
48) 2019 – ನಾನಾಜಿ ದೇಶಮುಖ್ – ಮಹಾರಾಷ್ಟ್ರ

49) 2024 – ಕರ್ಪೂರಿ ಠಾಕೂರ್ – ಬಿಹಾರ
50) 2024 – ಲಾಲ್ ಕೃಷ್ಣ ಅಡ್ವಾಣಿ

51) 2024 – ಪಿ.ವಿ.ನರಸಿಂಹರಾವ್ – ತೆಲಂಗಾಣ
52) 2024 – ಚೌಧರಿ ಚರಣ್ ಸಿಂಗ್ – ಉತ್ತರ ಪ್ರದೇಶ
53) 2024 – ಎಂ.ಎಸ್.ಸ್ವಾಮಿನಾಥನ್ – ತಮಿಳುನಾಡು


ರಾಜ್ಯವಾರು, ಕ್ಷೇತ್ರವಾರು ಭಾರತ ರತ್ನ ಪ್ರಶಸ್ತಿ ವಿಜೇತರ ಸಂಖ್ಯೆ :
ಭಾರತ ರತ್ನ ಪ್ರಶಸ್ತಿ ಗರಿಷ್ಠ ಸಾರ್ವಜನಿಕ ವ್ಯವಹಾರ ಕ್ಷೇತ್ರದ 27 ಸಾಧಕರಿಗೆ ಪ್ರದಾನ ಮಾಡಲಾಗಿದೆ. ಇದೇ ರೀತಿ, ವಿಜ್ಞಾನ ಮತ್ತು ಇಂಜಿನಿಯರಿಂಗ್ 8, ಕಲಾಕ್ಷೇತ್ರದ 7, ಸಮಾಜ ಕಾರ್ಯ 6, ಶಿಕ್ಷಣ ಮತ್ತು ಸಾಹಿತ್ಯ 2, ಕ್ರೀಡೆ -1, ವಾಣಿಜ್ಯ ಮತ್ತು ಕೈಗಾರಿಕೆ -1, ನಾಗರಿಕ ಸೇವೆ ಕ್ಷೇತ್ರದ ಒಬ್ಬರಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಮಹಾರಾಷ್ಟ್ರ 9,ಉತ್ತರ ಪ್ರದೇಶ 8,ದೆಹಲಿ 5,ಪಶ್ಚಿಮ ಬಂಗಾಳ 4,ಗುಜರಾತ್ 3,ಬಿಹಾರ, ಅಸ್ಸಾಂ, ಕರ್ನಾಟಕ ತಲಾ 2,ಒಡಿಶಾ, ತೆಲಂಗಾಣದ ತಲಾ ಒಬ್ಬರಿಗೆ ಭಾರತ ರತ್ನ ಪ್ರಶಸ್ತಿಗೆ ಭಾಜನರಾದರು.
ದಕ್ಷಿಣ ಆಫ್ರಿಕಾ, ಬ್ರಿಟನ್, ಅಮೆರಿಕ, ಪಾಕಿಸ್ತಾನ ತಲಾ ಒಬ್ಬರು ಸಾಧಕರು ಭಾರತ ರತ್ನಕ್ಕೆ ಭಾಜನರಾಗಿದ್ದಾರೆ.

ಇದುವರೆಗಿನ ಭಾರತ ರತ್ನ ಪ್ರಶಸ್ತಿ ಪುರಸ್ಕೃತರು :
1954
1) ಚಕ್ರವರ್ತಿ ರಾಜಗೋಪಾಲಾಚಾರಿ (ರಾಜಕಾರಣಿ, ಬರಹಗಾರ, ವಕೀಲ ಮತ್ತು ಸ್ವಾತಂತ್ರ್ಯ ಕಾರ್ಯಕರ್ತ)
2) ಡಾ.ಸರ್ವಪಲ್ಲಿ ರಾಧಾಕೃಷ್ಣನ್ (ತತ್ವಜ್ಞಾನಿ, ರಾಜಕಾರಣಿ ಮತ್ತು ಭಾರತದ ಮಾಜಿ ರಾಷ್ಟ್ರಪತಿ)
3) ಚಂದ್ರಶೇಖರ ವೆಂಕಟ ರಾಮನ್ (ಭೌತಶಾಸ್ತ್ರಜ್ಞ)

1955
4) ಭಗವಾನ್ ದಾಸ್ (ಸ್ವಾತಂತ್ರ್ಯ ಹೋರಾಟಗಾರ, ತತ್ವಜ್ಞಾನಿ ಮತ್ತು ಶಿಕ್ಷಣ ತಜ್ಞ)
5) ಮೋಕ್ಷಗುಂಡಂ ವಿಶ್ವೇಶ್ವರಯ್ಯ (ಸಿವಿಲ್ ಇಂಜಿನಿಯರ್, ರಾಜನೀತಿಜ್ಞ ಮತ್ತು ಮೈಸೂರಿನ ದಿವಾನ)
6) ಜವಾಹರಲಾಲ್ ನೆಹರು (ಸ್ವಾತಂತ್ರ್ಯ ಹೋರಾಟಗಾರ, ಲೇಖಕ ಮತ್ತು ಭಾರತದ ಮಾಜಿ ಪ್ರಧಾನಿ)

1957
7) ಗೋವಿಂದ ವಲ್ಲಭ ಪಂತ್ (ಸ್ವಾತಂತ್ರ್ಯ ಹೋರಾಟಗಾರ)

1958
8) ಧೋಂಡೋ ಕೇಶವ್ ಕರ್ವೆ (ಸಮಾಜ ಸುಧಾರಕ ಮತ್ತು ಶಿಕ್ಷಣತಜ್ಞ)

1961
9) ಬಿಧಾನ್ ಚಂದ್ರ ರಾಯ್ (ವೈದ್ಯ, ರಾಜಕೀಯ ನಾಯಕ, ಲೋಕೋಪಕಾರಿ, ಶಿಕ್ಷಣ ತಜ್ಞ ಮತ್ತು ಸಮಾಜ ಸೇವಕ)
10) ಪುರುಷೋತ್ತಮ್ ದಾಸ್ ಟಂಡನ್ (ಸ್ವಾತಂತ್ರ್ಯ ಹೋರಾಟಗಾರ)

1962
11) ಬಾಬು ರಾಜೇಂದ್ರ ಪ್ರಸಾದ್ (ಸ್ವಾತಂತ್ರ್ಯ ಹೋರಾಟಗಾರ, ವಕೀಲ, ರಾಜಕಾರಣಿ, ವಿದ್ವಾಂಸ ಮತ್ತು ಭಾರತದ ಮಾಜಿ ರಾಷ್ಟ್ರಪತಿ)

1963
12) ಝಕೀರ್ ಹುಸೇನ್ (ಸ್ವಾತಂತ್ರ್ಯ ಹೋರಾಟಗಾರ)
13) ಪಾಂಡುರಂಗ ವಾಮನ್ ಕಾನೆ, (ಭಾರತಶಾಸ್ತ್ರಜ್ಞ ಮತ್ತು ಸಂಸ್ಕೃತ ವಿದ್ವಾಂಸ)

1966
14) ಲಾಲ್ ಬಹದ್ದೂರ್ ಶಾಸ್ತ್ರಿ (ಮರಣೋತ್ತರ) (ಸ್ವಾತಂತ್ರ್ಯ ಹೋರಾಟಗಾರ ಮತ್ತು ಭಾರತದ ಮಾಜಿ ಪ್ರಧಾನಿ)
15) ಇಂದಿರಾ ಗಾಂಧಿ (ರಾಜಕಾರಣಿ ಮತ್ತು ಭಾರತದ ಮಾಜಿ ಪ್ರಧಾನಿ)

1975
16) ವರಾಹಗಿರಿ ವೆಂಕಟ ಗಿರಿ (ವಿವಿ ಗಿರಿ) (ಸ್ವಾತಂತ್ರ್ಯ ಹೋರಾಟಗಾರ ಮತ್ತು ಭಾರತದ ಮಾಜಿ ರಾಷ್ಟ್ರಪತಿ)

1976
17) ಕುಮಾರಸ್ವಾಮಿ ಕಾಮರಾಜ್ (ಮರಣೋತ್ತರ) (ರಾಜಕಾರಣಿ ಮತ್ತು ತಮಿಳುನಾಡು ಮಾಜಿ ಮುಖ್ಯಮಂತ್ರಿ)

1980
18) ಮದರ್ ಮೇರಿ ತೆರೇಸಾ ಬೊಜಾಕ್ಸಿಯು (ಮದರ್ ತೆರೇಸಾ) (ಮಿಷನರೀಸ್ ಆಫ್ ಚಾರಿಟಿಯ ಸ್ಥಾಪಕರು)

1983
19) ಆಚಾರ್ಯ ವಿನೋಬಾ ಭಾವೆ (ಮರಣೋತ್ತರ) (ಸ್ವಾತಂತ್ರ್ಯ ಕಾರ್ಯಕರ್ತ, ಸಮಾಜ ಸುಧಾರಕ)

1987
20) ಖಾನ್ ಅಬ್ದುಲ್ ಗಫರ್ ಖಾನ್ (ಸ್ವಾತಂತ್ರ್ಯ ಹೋರಾಟಗಾರ)

1988
21) ಮರುದೂರು ಗೋಪಾಲನ್ ರಾಮಚಂದ್ರನ್ (ಎಂಜಿಆರ್‌) (ಮರಣೋತ್ತರ) ( ನಟನೆಯಿಂದ ರಾಜಕಾರಣಕ್ಕೆ ಬಂದವರು)

1990
22) ಡಾ. ಭೀಮ್ ರಾವ್ ರಾಮ್‌ಜಿ ಅಂಬೇಡ್ಕರ್ (ಮರಣೋತ್ತರ) (ಸಮಾಜ ಸುಧಾರಕ)
23) ನೆಲ್ಸನ್ ರೋಲಿಹ್ಲಾ ಮಂಡೇಲಾ (ವರ್ಣಭೇದ ನೀತಿ ವಿರೋಧಿ ಕಾರ್ಯಕರ್ತ)

1991
24) ರಾಜೀವ್ ಗಾಂಧಿ (ಮರಣೋತ್ತರ) (ರಾಜಕಾರಣಿ, ಮಾಜಿ ಪ್ರಧಾನಿ)
25) ಸರ್ದಾರ್ ವಲ್ಲಭಭಾಯಿ ಪಟೇಲ್ (ಮರಣೋತ್ತರ) (ಸ್ವಾತಂತ್ರ್ಯ ಹೋರಾಟಗಾರ)
26) ಮೊರಾರ್ಜಿ ರಾಂಚೋಡ್ಜಿ ದೇಸಾಯಿ (ಸ್ವಾತಂತ್ರ್ಯ ಹೋರಾಟಗಾರ ಮತ್ತು ಭಾರತದ ಪ್ರಧಾನ ಮಂತ್ರಿ)

1992
27) ಮೌಲಾನಾ ಅಬುಲ್ ಕಲಾಂ ಆಜಾದ್ (ಮರಣೋತ್ತರ) (ಸ್ವಾತಂತ್ರ್ಯ ಕಾರ್ಯಕರ್ತ)
28) ಜಹಾಂಗೀರ್ ರತನ್‌ಜಿ ದಾದಾಭಾಯಿ ಟಾಟಾ (ಕೈಗಾರಿಕೋದ್ಯಮಿ)
29) ಸತ್ಯಜಿತ್ ರೇ (ಚಲನಚಿತ್ರ ನಿರ್ಮಾಪಕ)

1997
30) ಗುಲ್ಜಾರಿ ಲಾಲ್ ನಂದಾ (ಸ್ವಾತಂತ್ರ್ಯ ಕಾರ್ಯಕರ್ತ)
31) ಅರುಣಾ ಅಸಫ್ ಅಲಿ (ಮರಣೋತ್ತರ) (ಸ್ವಾತಂತ್ರ್ಯ ಕಾರ್ಯಕರ್ತೆ)
32) ಎ.ಪಿ.ಜೆ. ಅಬ್ದುಲ್ ಕಲಾಂ (ಏರೋಸ್ಪೇಸ್, ​​ರಕ್ಷಣಾ ವಿಜ್ಞಾನಿ ಮತ್ತು ಭಾರತದ ಮಾಜಿ ರಾಷ್ಟ್ರಪತಿ)

1998
33) ಮಧುರೈ ಷಣ್ಮುಖವಡಿವು ಸುಬ್ಬುಲಕ್ಷ್ಮಿ (ಕರ್ನಾಟಿಕ್ ಶಾಸ್ತ್ರೀಯ ಗಾಯಕಿ)
34) ಚಿದಂಬರಂ ಸುಬ್ರಮಣ್ಯಂ (ಸ್ವಾತಂತ್ರ್ಯ ಹೋರಾಟಗಾರ)
35) ಲೋಕಪ್ರಿಯಾ ಗೋಪಿನಾಥ್ ಬೊರ್ಡೊಲೊಯ್ (ಮರಣೋತ್ತರ) (ಸ್ವಾತಂತ್ರ್ಯ ಕಾರ್ಯಕರ್ತೆ)

1999
36) ಜಯಪ್ರಕಾಶ್ ನಾರಾಯಣ್ (ಮರಣೋತ್ತರ) (ಸ್ವಾತಂತ್ರ್ಯ ಹೋರಾಟಗಾರ, ಸಮಾಜ ಸುಧಾರಕ)
37) ಅಮರ್ತ್ಯ ಸೇನ್ (ಅರ್ಥಶಾಸ್ತ್ರಜ್ಞ)
38) ರವಿಶಂಕರ್ (ಸಿತಾರ್ ವಾದಕ)

2001
39) ಲತಾ ದೀನಾನಾಥ್ ಮಂಗೇಶ್ಕರ್ (ಹಿನ್ನೆಲೆ ಗಾಯಕಿ)
40) ಉಸ್ತಾದ್ ಬಿಸ್ಮಿಲ್ಲಾ ಖಾನ್ (ಹಿಂದೂಸ್ತಾನಿ ಶಾಸ್ತ್ರೀಯ ಶೆಹನಾಯಿ ವಾದಕ)

2009
41) ಭೀಮಸೇನ್ ಗುರುರಾಜ್ ಜೋಶಿ (ಹಿಂದೂಸ್ತಾನಿ ಶಾಸ್ತ್ರೀಯ ಗಾಯಕ)

2014
42) ಸಿಎನ್‌ ಆರ್‌ ರಾವ್ (ರಸಾಯನಶಾಸ್ತ್ರಜ್ಞ ಮತ್ತು ಪ್ರಾಧ್ಯಾಪಕ)
43) ಸಚಿನ್ ರಮೇಶ್ ತೆಂಡೂಲ್ಕರ್ (ಕ್ರಿಕೆಟಿಗ)

2015
44) ಅಟಲ್ ಬಿಹಾರಿ ವಾಜಪೇಯಿ (ರಾಜಕಾರಣಿ, ಮಾಜಿ ಪ್ರಧಾನಿ)
45) ಮದನ್ ಮೋಹನ್ ಮಾಳವೀಯ (ಮರಣೋತ್ತರ) (ವಿದ್ವಾಂಸ ಮತ್ತು ಶೈಕ್ಷಣಿಕ ಸುಧಾರಕ)

2019
46) ನಾನಾಜಿ ದೇಶಮುಖ್ (ಮರಣೋತ್ತರ) (ಸಾಮಾಜಿಕ ಕಾರ್ಯಕರ್ತ)
47) ಭೂಪೇಂದ್ರ ಕುಮಾರ್ ಹಜಾರಿಕಾ (ಮರಣೋತ್ತರ) (ಹಿನ್ನೆಲೆ ಗಾಯಕ, ಗೀತರಚನೆಕಾರ, ಸಂಗೀತಗಾರ, ಕವಿ ಮತ್ತು ಚಲನಚಿತ್ರ ನಿರ್ಮಾಪಕ)
48) ಪ್ರಣಬ್ ಮುಖರ್ಜಿ (ರಾಜಕಾರಣಿ ಮತ್ತು ಭಾರತದ ಮಾಜಿ ರಾಷ್ಟ್ರಪತಿ)
49) ಕರ್ಪೂರಿ ಠಾಕೂರ್ (ಮರಣೋತ್ತರ) (ರಾಜಕಾರಣಿ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ)

50) ಲಾಲ್ ಕೃಷ್ಣ ಅಡ್ವಾಣಿ (ರಾಜಕಾರಣಿ ಮತ್ತು ಮಾಜಿ ಉಪಪ್ರಧಾನಿ)
51) 2024 – ಪಿ.ವಿ.ನರಸಿಂಹರಾವ್ – ಮಾಜಿ ಉಪಪ್ರಧಾನಿ
52) 2024 – ಚೌಧರಿ ಚರಣ್ ಸಿಂಗ್ – ಮಾಜಿ ಉಪಪ್ರಧಾನಿ
53) 2024 – ಎಂ.ಎಸ್.ಸ್ವಾಮಿನಾಥನ್ – ಕೃಷಿ ವಿಜ್ಞಾನಿ

Leave a Reply

Your email address will not be published. Required fields are marked *

error: Content Copyright protected !!