Current AffairsLatest Updates

Current Affairs Today : ಇಂದಿನ ಪ್ರಚಲಿತ ವಿದ್ಯಮಾನಗಳು – ಮಾರ್ಚ್, 14, 2025

Share With Friends

Current Affairs Today :

* ಪಾಕಿಸ್ತಾನದ ಜಾಫರ್ ಎಕ್ಸ್‌ಪ್ರೆಸ್ ದಾಳಿಯಲ್ಲಿ ಕೈವಾಡವನ್ನು ತಳ್ಳಿಹಾಕಿದ ಭಾರತ
ಜಾಫರ್ ಎಕ್ಸ್‌ಪ್ರೆಸ್ ದಾಳಿಯಲ್ಲಿ ಭಾರತದ ಕೈವಾಡವಿದೆ ಎಂಬ ಪಾಕಿಸ್ತಾನದ ವಿದೇಶಾಂಗ ಕಚೇರಿಯ ಸಲಹೆಗಳನ್ನು ಭಾರತ ಬಲವಾಗಿ ನಿರಾಕರಿಸಿದೆ. ವಿದೇಶಾಂಗ ಸಚಿವಾಲಯದ ಅಧಿಕೃತ ವಕ್ತಾರ ರಣಧೀರ್ ಜೈಸ್ವಾಲ್, “ಪಾಕಿಸ್ತಾನ ಮಾಡಿದ ಆಧಾರರಹಿತ ಆರೋಪಗಳನ್ನು ನಾವು ಬಲವಾಗಿ ತಿರಸ್ಕರಿಸುತ್ತೇವೆ. ಜಾಗತಿಕ ಭಯೋತ್ಪಾದನೆಯ ಕೇಂದ್ರಬಿಂದು ಎಲ್ಲಿದೆ ಎಂದು ಇಡೀ ಜಗತ್ತಿಗೆ ತಿಳಿದಿದೆ. ಪಾಕಿಸ್ತಾನವು ಬೆರಳು ತೋರಿಸಿ ತನ್ನ ಆಂತರಿಕ ಸಮಸ್ಯೆಗಳು ಮತ್ತು ವೈಫಲ್ಯಗಳಿಗೆ ಇತರರ ಮೇಲೆ ಹೊಣೆಗಾರಿಕೆಯನ್ನು ಹೊರಿಸುವ ಬದಲು ಒಳಮುಖವಾಗಿ ನೋಡಬೇಕು” ಎಂದು ಹೇಳಿದರು.

ಜಾಫರ್ ಎಕ್ಸ್‌ಪ್ರೆಸ್‌ ದಾಳಿಯಲ್ಲಿ ಭಾಗಿಯಾಗಿರುವ ಪ್ರತ್ಯೇಕತಾವಾದಿಗಳಿಗೆ ಅಫ್ಘಾನಿಸ್ತಾನದ ನಾಯಕರೊಂದಿಗೆ ಸಂಪರ್ಕವಿದೆ. ಪಾಕಿಸ್ತಾನದಲ್ಲಿ ಭಯೋತ್ಪಾದನೆ ಹರಡುವುದರಲ್ಲಿ ಭಾರತದ ಪಾತ್ರವು ಇದೆ ಎಂದು ಪಾಕಿಸ್ತಾನದ ವಿದೇಶಾಂಗ ಕಚೇರಿಯ ವಕ್ತಾರ ಶಫ್ಕತ್ ಅಲಿ ಖಾನ್ ಹೇಳಿದ್ದರು.

ಕ್ವೆಟ್ಟಾದಿಂದ ಪೆಶಾವರಕ್ಕೆ 400ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಜಾಫರ್ ಎಕ್ಸ್‌ಪ್ರೆಸ್‌ ರೈಲನ್ನು ಪ್ರತ್ಯೇಕತಾವಾದಿಗಳು ಅಪಹರಿಸಿದ್ದರು. ಒತ್ತೆಯಾಳುಗಳನ್ನು ರಕ್ಷಿಸಲಾಗಿದೆ ಮತ್ತು 33 ಪ್ರತ್ಯೇಕತಾವದಿಗಳನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನದ ಭದ್ರತಾ ಪಡೆಗಳು ಹೇಳಿಕೊಂಡಿದೆ.


* ISRO : ಉಪಗ್ರಹ ಉಡಾವಣೆ ಮೂಲಕ 143 ಮಿಲಿಯನ್ ಡಾಲರ್ ಆದಾಯ ಗಳಿಸಿದ ಭಾರತ


* IPL 2025 : ಡೆಲ್ಲಿ ಕ್ಯಾಪಿಟಲ್ಸ್‌ ತಂಡಕ್ಕೆ ನಾಯಕನಾಗಿ ಅಕ್ಷರ್‌ ಪಟೇಲ್‌ ಆಯ್ಕೆ
ಐಪಿಎಲ್ 2025 ರ ಸೀಸನ್‌ಗೆ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ತಂಡಕ್ಕೆ ನಾಯಕನಾಗಿ ಅಕ್ಷರ್ ಪಟೇಲ್ (Axar Patel) ನೇಮಕಗೊಂಡಿದ್ದಾರೆ. 2019 ರಿಂದ ಡೆಲ್ಲಿ ಕ್ಯಾಪಿಟಲ್ಸ್‌ನೊಂದಿಗೆ ಆಡುತ್ತಿರುವ ಅಕ್ಷರ್, 2024 ರ ಮೆಗಾ ಹರಾಜಿಗೆ ಮುನ್ನ 16.50 ಕೋಟಿ ರೂ.ಗೆ ತಂಡದ ಗರಿಷ್ಠ ರಿಟರ್ನ್ ಆಗಿದ್ದರು. ನಾಯಕತ್ವದ ಅನುಭವವಿಲ್ಲದಿದ್ದರೂ, 2025ರ ಜನವರಿಯಲ್ಲಿ ಅವರು ಭಾರತದ T20I ಉಪನಾಯಕರಾಗಿದ್ದರು. ಸೈಯದ್ ಮುಷ್ತಾಕ್ ಅಲಿ ಮತ್ತು ವಿಜಯ್ ಹಜಾರೆ ಟ್ರೋಫಿಗಳು ಸೇರಿದಂತೆ 23 ಪಂದ್ಯಗಳಲ್ಲಿ ಗುಜರಾತ್ ಅನ್ನು ಮುನ್ನಡೆಸಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್‌ ತಂಡವು ಮಾರ್ಚ್ 24 ರಂದು ವಿಶಾಖಪಟ್ಟಣಂನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ತನ್ನ ಮೊದಲ ಪಂದ್ಯ ಆಡಲಿದೆ. ಕಳೆದ ಋತುವಿನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಅಂಕಪಟ್ಟಿಯಲ್ಲಿ ಆರನೇ ಸ್ಥಾನದೊಂದಿಗೆ 14 ಅಂಕಗಳನ್ನು ಗಳಿಸಿತ್ತು. ತನ್ನ ತಂಡವನ್ನು ಬಲಪಡಿಸುವ ಉದ್ದೇಶದಿಂದ, ಫ್ರಾಂಚೈಸಿ ಹರಾಜಿನಲ್ಲಿ ಕೆಎಲ್ ರಾಹುಲ್ ಅವರನ್ನು 14 ಕೋಟಿ ರೂ.ಗೆ ಮತ್ತು ಆಸ್ಟ್ರೇಲಿಯಾದ ವೇಗಿ ಮಿಚೆಲ್ ಸ್ಟಾರ್ಕ್ ಅವರನ್ನು 11.75 ಕೋಟಿ ರೂ.ಗೆ ಖರೀದಿಸಿದೆ.


* ಬಜೆಟ್ ಪ್ರತಿಯಲ್ಲಿ ರೂಪಾಯಿ ಚಿಹ್ನೆ ‘₹’ ಕೈಬಿಟ್ಟ ತಮಿಳುನಾಡು
ಕೇಂದ್ರ ಸರ್ಕಾರದೊಂದಿಗಿನ ಭಾಷಾ ವಿವಾದ ನಡೆಸುತ್ತಿರುವ ತಮಿಳುನಾಡು ಈಗ ಮತ್ತೆ ಒಂದು ಹೆಜ್ಜೆ ಮುಂದಕ್ಕೆ ಇಟ್ಟಿದೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ (MK Stalin) 2025-26 ರ ರಾಜ್ಯ ಬಜೆಟ್‌‌ನಲ್ಲಿ ರೂಪಾಯಿಯ ಅಧಿಕೃತ ಚಿಹ್ನೆ ‘₹’ ಕೈ ಬಿಟ್ಟಿದ್ದು ಬದಲಿಗೆ ‘ರುಬಾಯಿ’ (ತಮಿಳಿನಲ್ಲಿ ರೂಪಾಯಿ) ಯಿಂದ ‘ರು’ ಅನ್ನು ಆಯ್ಕೆ ಮಾಡಿಕೊಂಡು ಹೊಸ ಚರ್ಚೆಯನ್ನು ಹುಟ್ಟು ಹಾಕಿದ್ದಾರೆ.

ಹಿಂದಿನ ಎರಡು ಬಜೆಟ್‌ಗಳಲ್ಲಿ, ರಾಜ್ಯವು ತನ್ನ ಲೋಗೋಗಳಿಗಾಗಿ ರೂಪಾಯಿ ಚಿಹ್ನೆಯನ್ನು ಬಳಸಿತ್ತು. 2023-24ರ ಬಜೆಟ್‌ನಲ್ಲಿಯೂ ಸಹ ಈ ಚಿಹ್ನೆಯನ್ನು ಪ್ರಮುಖವಾಗಿ ತೋರಿಸಲಾಗಿತ್ತು, ಇದನ್ನು ಐಐಟಿ-ಗುವಾಹಟಿಯ ಪ್ರಾಧ್ಯಾಪಕ ಉದಯ ಕುಮಾರ್ ಧರ್ಮಲಿಂಗಂ ವಿನ್ಯಾಸಗೊಳಿಸಿದ್ದರು. ‘₹’ ಯಲ್ಲಿ ಹಿಂದಿಯ ‘ರಾ’ ಹೋಲಿಕೆ ಇರುವ ಹಿನ್ನೆಲೆಯಲ್ಲಿ ಬಳಸದಿರಲು ಸರ್ಕಾರ ನಿರ್ಧರಿಸಿದೆ. ರಾಷ್ಟ್ರೀಯ ಕರೆನ್ಸಿ ಚಿಹ್ನೆಯನ್ನು ರಾಜ್ಯವೊಂದು ತಿರಸ್ಕರಿಸಿರುವುದು ಇದೇ ಮೊದಲು.


* Sunita Williams : ಮಾ.19ರಂದು ಬಾಹ್ಯಾಕಾಶದಿಂದ ಭೂಮಿಗೆಯತ್ತ ಹೋರಾಡಲಿದ್ದಾರೆ ಸುನೀತಾ ವಿಲಿಯಮ್ಸ್


* ಹಲವು ಬೇಡಿಕೆಗಾಲ ಜೊತೆ ರಷ್ಯಾ-ಉಕ್ರೇನ್‌ ಯುದ್ಧ ವಿರಾಮ ಪ್ರಸ್ತಾಪಕ್ಕೆ ಒಪ್ಪಿಗೆ
ಉಕ್ರೇನ್‌ (Russia-Ukraine War) ಮೇಲೆ ಯುದ್ಧ ನಡೆಸುತ್ತಿರುವ ರಷ್ಯಾವು ಅಮೆರಿಕದ (America) ಕದನ ವಿರಾಮ ಪ್ರಸ್ತಾಪಕ್ಕೆ ಒಪ್ಪಿಗೆ ಸೂಚಿಸಿದೆ. ಷರತ್ತುಬದ್ಧ ಒಪ್ಪಿಗೆ ಸೂಚಿಸಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin), ಒಪ್ಪಿಗೆ ಜೊತೆಗೆ ಹಲವು ಬೇಡಿಕೆಗಳನ್ನೂ ಮುಂದಿಟ್ಟಿದ್ದಾರೆ. ಕದನ ವಿರಾಮವು ಶಾಶ್ವತ ಶಾಂತಿಗೆ ಕಾರಣವಾಗಬೇಕು. ಸಂಘರ್ಷದ ಮೂಲ ಕಾರಣಗಳನ್ನು ಪರಿಹರಿಸಬೇಕು. ಯುದ್ಧ ವಿರಾಮ ಉಕ್ರೇನ್ ಮತ್ತೆ ಸಶಸ್ತ್ರೀಕರಣಗೊಳ್ಳಲು ಅವಕಾಶ ನೀಡಬಹುದು. ತನ್ನ ಸೇನೆಯನ್ನು ಮತ್ತೆ ಸಜ್ಜುಗೊಳಿಸಲು ಸಹಕಾರಿಯಾಗಬಹುದು ಎಂದು ಪುಟಿನ್‌ ಬೇಡಿಕೆ ಮುಂದಿಟ್ಟಿದ್ದಾರೆ.

ರಷ್ಯಾದ 2,000 ಕಿಲೋಮೀಟರ್ ವ್ಯಾಪ್ತಿಯಲ್ಲಿ ಉಕ್ರೇನ್ ಸೇನೆ ಸಾಕಷ್ಟು ನಷ್ಟ ಮಾಡಿದೆ. ಬಂಧಿತ ಸೈನಿಕರನ್ನು ಹಾಗೇ ಹೋಗಲು ಬಿಡಬೇಕೇ? ಉಕ್ರೇನ್ ಅವರಿಗೆ ಶರಣಾಗಲು ಸೂಚಿಸುತ್ತದೆಯೇ? ಅಮೆರಿಕದ ಅಧಿಕಾರಿಗಳು ಅಥವಾ ಟ್ರಂಪ್ ಜೊತೆಗೆ ಮಾತುಕತೆಗೆ ಸಿದ್ಧ. ಸಂಘರ್ಷವನ್ನು ಶಾಂತಿಯುತವಾಗಿ ಕೊನೆಗೊಳಿಸಲು ನಾವು ಸಿದ್ಧ ಎಂದು ಕದನ ವಿರಾಮ ಒಪ್ಪಂದಕ್ಕೆ ಒಪ್ಪಿಗೆ ಸೂಚಿಸುತ್ತಲೇ ರಷ್ಯಾ ಹಲವು ಬೇಡಿಕೆಗಳನ್ನು ಮುಂದಿಟ್ಟಿದೆ.


* SpaDeX : ಉಪಗ್ರಹಗಳ ಅನ್‌ಡಾಕ್ ಕಾರ್ಯ ಯಶಸ್ವಿಯಾಗಿ ಪೂರ್ಣಗೊಳಿಸಿದ ಇಸ್ರೋ


* ಪ್ರಧಾನಿ ಮೋದಿ, ಟ್ರಂಪ್​ಗೆ ಧನ್ಯವಾದ ತಿಳಿಸಿದ ಪುಟಿನ್
ಉಕ್ರೇನ್-ರಷ್ಯಾ ಯುದ್ಧ ವಿರಾಮ ಮಾತುಕತೆಗಳಲ್ಲಿ ಭಾರತದ ಪ್ರಧಾನಿ ಮೋದಿಯೂ ಪ್ರಮುಖ ಪಾತ್ರ ವಹಿಸಿದ್ದಾರೆ. ಅದನ್ನು ಅಲ್ಲಗಲೆಯುವಂತಿಲ್ಲ. ಉಕ್ರೇನ್‌ನಲ್ಲಿ 30 ದಿನಗಳ ಕದನ ವಿರಾಮಕ್ಕಾಗಿ ಅಮೆರಿಕದ ಪ್ರಸ್ತಾಪಕ್ಕೆ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮೊದಲ ಬಾರಿಗೆ ಪ್ರತಿಕ್ರಿಯಿಸಿದರು. ಉಕ್ರೇನ್-ರಷ್ಯಾ ಸಂಘರ್ಷವನ್ನು ಪರಿಹರಿಸಲು ಮಾಡಿದ ಪ್ರಯತ್ನಗಳಿಗಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಪ್ರಧಾನಿ ನರೇಂದ್ರ ಮೋದಿ ಮತ್ತು ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಸೇರಿದಂತೆ ವಿಶ್ವ ನಾಯಕರಿಗೆ ಧನ್ಯವಾದ ಅರ್ಪಿಸಿದರು.

error: Content Copyright protected !!