Karnataka Royal Dynasties : ಕರ್ನಾಟಕವನ್ನಾಳಿದ ಪ್ರಮುಖ ರಾಜಮನೆತನಗಳು ಸಂಕ್ಷಿಪ್ತ ಮಾಹಿತಿ
Karnataka Royal Dynasties
1) ಮೌರ್ಯರು
ರಾಜ್ಯದ ನಾನಾ ಭಾಗಗಳಲ್ಲಿ ದೊರೆತಿರುವ ಶಾಸನಗಳು ಕನ್ನಡನಾಡು ಉತ್ತರದ ಮೌರ್ಯರ ಆಡಳಿತಕ್ಕೆ ಕ್ರಿ.ಪೂ. 3ನೇ ಶತಮಾನದಲ್ಲಿ ಒಳಪಟ್ಟಿತ್ತು ಎಂದು ಸಾರುತ್ತವೆ. ಮೌರ್ಯರ ಹೆಸರಾಂತ ದೊರೆ ಅಶೋಕ (ಕ್ರಿ.ಪೂ. 273-233) ನ ಶಾಸನಗಳು ರಾಜ್ಯದ 11 ಸ್ಥಳಗಳಲ್ಲಿ ಕಂಡು ಬಂದಿವೆ.
ಚಂದ್ರಗುಪ್ತ ಮೌರ್ಯನು ತನ್ನ ಗುರು ಭದ್ರಬಾಹುವಿನೊಡನೆ ಕರ್ನಾಟಕದ ಶ್ರವಣ ಬೆಳಗೊಳದಲ್ಲಿ ಬಂದು ನೆಲೆಸಿದ್ದನು.
ಅಶೋಕನ ಕರ್ನಾಟಕದ ಪ್ರಾಂತ್ಯಗಳ ರಾಜಧಾನಿಗಳು : ಸುವರ್ಣಗಿರಿ, ಇಸಿಲ, ತೊಸಿಲ, ಸಂಪ.
ಕರ್ನಾಟಕದಲ್ಲಿ ಅಶೋಕನ ಶಾಸನಗಳು ದೊರೆತ ಸ್ಥಳಗಳು :
ಚಿತ್ರದುರ್ಗ ಜಿಲ್ಲೆಯ ಬ್ರಹ್ಮಗಿರಿ, ಅ.ಸಿದ್ದಾಪುರ, ಜಿ.ರಾಮೇಶ್ವರ.
ರಾಯಚೂರು ಜಿಲ್ಲೆಯ ಗವಿಮಠ,ಮಾಸ್ಕಿ, ಪಾಲ್ಕಿಗುಂಡು, ಕೊಪ್ಪಳ.
ಗುಲ್ಬರ್ಗಾ ಜಿಲ್ಲೆಯ ಸನ್ನತಿ.
ಬಳ್ಳಾರಿ ಜಿಲ್ಲೆಯ ನಿಟ್ಟೂರು, ಉದೇಗೊಳ್ಳಂ
2) ಶಾತವಾಹನರು (ಕ್ರಿ.ಪೂ. 238 – ಕ್ರಿ.ಶ 225)
ಮೌರ್ಯರ ಸಾಮಂತರಾಗಿದ್ದ ಇವರು, ಮೌರ್ಯರ ನಂತರ ಸ್ವತಂತ್ರರಾಗಿ, (ಕ್ರಿ.ಪೂ. 225 ರವರೆಗೆ ಆಳ್ವಿಕೆ ನಡೆಸಿದರು.
ಇವರ ರಾಜಧಾನಿ : ಪೈತಾನ್ ಅಥವಾ ಪ್ರತಿಷ್ಠಾನ.
ಇವರ ಲಾಂಛನ : ವರುಣ.
ಇವರೇ ಕ್ರಿ.ಶ 78ರಲ್ಲಿ ಶಾಲಿವಾಹನ ಶಕೆಯನ್ನು ಪ್ರಾರಂಭಿಸಿದವರು.
ಶಾತವಾಹನರ ಮೂಲ ಪುರುಷ : ಸಿಮುಖ.
ಈ ಸಂತತಿಯ ಅತ್ಯಂತ ಪ್ರಮುಖ ದೊರೆ : ಗೌತಮಿಪುತ್ರ ಶಾತಕರ್ಣಿ
ಶಾತವಾಹನರನ್ನು ‘ ಶಾತಕರ್ಣಿಗಳೆಂದು’ ಕರೆಯುತ್ತಾರೆ.
3) ಬನವಾಸಿಯ ಕದಂಬರು (ಕ್ರಿ.ಶ 345 – 540)
ಈ ಸಂತತಿಯ ಸ್ಥಾಪಕ :ಮಯೂರವರ್ಮ (ಮಯೂರಶರ್ಮ) (345-360)
ಕದಂಬರ ರಾಜಧಾನಿ : ಬನವಾಸಿ (ಉ.ಕನ್ನಡ ಜಿಲ್ಲೆಯಲ್ಲಿದೆ)
ಬನವಾಸಿಗೆ ವನವಾಸಿ, ವೈಜಯಂತಿ, ಬೈಜಾಂಟಾಯಿನ್ ಎಂಬ ಹೆಸರುಗಳಿದ್ದವು.
ಇವರ ಲಾಂಛನ : ಸಿಂಹ.
ಕದಂಬರಲ್ಲಿ ಹಾನಗಲ್, ಚಂದಾವರ, ಗೋವೇ ಕದಂಬ ರೆಂದು ಮೂರು ಶಾಖೆಗಳಿದ್ದವು.
ಕದಂಬರ ಮೂಲದ ಬಗ್ಗೆ ‘ಶಾಂತಿವರ್ಮನ ತಾಳಗುಂದ ಶಾಸನ’ ತಿಳಿಸುತ್ತದೆ.
ಕನ್ನಡದ ಪ್ರಪ್ರಥಮ ಶಾಸನ – ಕಾಕುತ್ಸವರ್ಮನ ಹಲ್ಮಿಡಿ ಶಾಸನ.
4) ತಲಕಾಡಿನ ಗಂಗರು (ಕ್ರಿ.ಶ 350- 999)
ದಡಿಗ ಮತ್ತು ಮಾದವರು ಗಂಗ ವಂಶದ ಸ್ಥಾಪಕರು.
ಈ ಸಂತತಿಯ ಮೊದಲ ದೊರೆ : ದಡಿಗ (350 -400)
ಇವರ ಮೊದಲ ರಾಜಧಾನಿ : ಕೋಲಾರ ಬಳಿಯ ಕುವಲಾಲ
ಇವರ ಎರಡನೆಯ ರಾಜಧಾನಿ : ತಲಕಾಡು
ತಲಕಾಡಿನ ಮತ್ತೊಂದು ಹೆಸರು : ತಲವನಪುರ.
ಇವರ ಮೂರನೇ ರಾಜಧಾನಿ : ಚೆನ್ನಪಟ್ಟಣ ಬಳಿಯ ಮಾಕುಂದ
ಇವರ ಲಾಂಛನ : ಆನೆ(ಮದಗಜ)
ಈ ಸಂತತಿಯ ಅತ್ಯಂತ ಪ್ರಸಿದ್ಧ ದೊರೆ : ದುರ್ವಿನೀತ (540-600)
ಶ್ರವಣಬೆಳಗೊಳದಲ್ಲಿ ಬಾಹುಬಲಿ ವಿಗ್ರಹವನ್ನು ಕೆತ್ತಿಸಿದ ಚಾವುಂಡರಾಯ ಗಂಗರ ಆಸ್ಥಾನದಲ್ಲಿ ಮಂತ್ರಿ ಹಾಗೂ ದಂಡನಾಯಕನಾಗಿದ್ದನು.
ಚಾವುಂಡರಾಯನು 4ನೇ ರಾಚಮಲ್ಲನ ಪ್ರಧಾನಮಂತ್ರಿಯಾಗಿದ್ದನು.
5) ಬಾದಾಮಿಯ ಚಾಲುಕ್ಯರು (ಕ್ರಿ.ಶ 500- 757)
ಈ ಸಂತತಿಯ ಸ್ಥಾಪಕ : ಜಯಸಿಂಹ
ಇವರ ರಾಜಧಾನಿ : ಬಾದಾಮಿ ಅಥವಾ ವಾತಾಪಿ (ಬಿಜಾಪುರ ಜಿಲ್ಲೆಯಲ್ಲಿದೆ)
ಈ ಸಂತತಿಯ ಅತ್ಯಂತ ಪ್ರಸಿದ್ಧ ದೊರೆ : ಇಮ್ಮಡಿ ಪುಲಕೇಶಿ (609-642)
ಇವರ ರಾಜ ಲಾಂಛನ : ವರಹ.
ಇಮ್ಮಡಿ ಪುಲಕೇಶಿಯ ಆಸ್ಥಾನಕ್ಕೆ ಭೇಟಿಯಿತ್ತ ವಿದೇಶಿ ಪ್ರವಾಸಿಗ : ಚೀನಾದ ಬೌದ್ಧ ಯಾತ್ರಿಕ ಹ್ಯೂಯನ್ ತ್ಸಾಂಗ್.
ಬಾದಾಮಿಯ ಚಾಲುಕ್ಯರ ನಿರ್ಮಿತ ಐಹೊಳೆಯನ್ನು ‘ಭಾರತೀಯ ದೇವಾಲಯದ ವಾಸ್ತುಶಿಲ್ಪದ ತೊಟ್ಟಿಲು ‘ ಎನ್ನುವರು.
6) ಮಾನ್ಯಖೇಟದ ರಾಷ್ಟ್ರಕೂಟರು (ಕ್ರಿ.ಶ 345 – 540)
ಈ ಸಂತತಿಯ ಸ್ಥಾಪಕ : ದಂತಿದುರ್ಗ
ಇವರ ರಾಜಧಾನಿ : ಮಾನ್ಯಖೇಟ ಅಥವಾ ಮಾಲಖೇಡವಾಗಿತ್ತು.
ಇವರ ಲಾಂಛನ : ಗರುಡ
ಈ ಸಂತತಿಯ ಅತ್ಯಂತ ಹೆಸರಾಂತ ದೊರೆ :ಅಮೋಘವರ್ಷ ನೃಪತುಂಗ (814-878)
ಕ್ರಿ.ಶ 851 ರಲ್ಲಿ ಅರಬ್ ಪ್ರವಾಸಿ ಸುಲೈಮಾನ್ ನು ಇವನ ಆಸ್ಥಾನಕ್ಕೆ ಭೇಟಿ ಕೊಟ್ಟಿದ್ದನು.
7) ಕಲ್ಯಾಣದ ಚಾಲುಕ್ಯರು (ಕ್ರಿ.ಶ 973-1156 ಹಾಗೂ 1183-1200)
ಇಮ್ಮಡಿ ತೈಲಪ ಕಲ್ಯಾಣದ ಚಾಲುಕ್ಯ ಸಂಸ್ಥಾನದ ಸ್ಥಾಪಕ
ಇವರ ರಾಜಧಾನಿ : ಕಲ್ಯಾಣ
ಈ ಸಂತತಿಯ ಅತ್ಯಂತ ಪ್ರಮುಖ ದೊರೆ : 6ನೇ ವಿಕ್ರಮಾದಿತ್ಯ (1076-1126)
1156 ರಲ್ಲಿ ಸಿಂಹಾಸನವನ್ನು ಕಳೆದುಕೊಂಡ ಇವರ ದೊರೆಗಳು ಪುನಃ 1183 ರಿಂದ 1200 ರವರೆಗೆ ರಾಜ್ಯಭಾರ ನಡೆಸಿದರು.
8) ಕಲ್ಯಾಣಿಯ ಕಲಚೂರಿಗಳು (ಕ್ರಿ.ಶ 1156 – 1183)
ಕೇವಲ ಸಾಮಂತರಾಗಿ ಅಧಿಕಾರ ನಡೆಸುತ್ತಿದ್ದ ಕಲ್ಯಾಣಿಯ ಕಲಚೂರಿಗಳು ಬಿಜ್ಜಳ (1156-1168) ನಿಂದಾಗಿ ಅಲ್ಪಕಾಲ ಸ್ವತಂತ್ರವಾಗಿ ರಾಜ್ಯಭಾರ ನಡೆಸಿದರು.
ಹೆಸರಾಂತ ಸಮಾಜ ಸುಧಾಕರ ಬಸವಣ್ಣನವರು ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು.
9) ದ್ವಾರಸಮುದ್ರದ ಹೊಯ್ಸಳರು (ಕ್ರಿ.ಶ 985 – 1346)
ಈ ಸಂತತಿಯ ಮೂಲ ಪುರುಷ : ಸಳ.
ಇವರ ರಾಜಧಾನಿ : ಹಳೇಬೀಡು ಅಥವಾ ದ್ವಾರಸಮುದ್ರವಾಗಿತ್ತು.
ಈ ಸಂತತಿಯ ಅತ್ಯಂತ ಪ್ರಮುಖ ದೊರೆ : ವಿಷ್ಣುವರ್ಧನ ಅಥವಾ ಬಿಟ್ಟಿದೇವ (1108-1152)
ಬೇಲೂರಿನ ಚೆನ್ನಕೇಶವ ಮತ್ತು ಹಳೇಬೀಡಿನ ಹೊಯ್ಸಳೇಶ್ವರ ದೇವಾಲಯಗಳು ಹೊಯ್ಸಳರ ಕೊಡುಗೆಗಳಾಗಿವೆ.
10) ವಿಜಯನಗರ ಸಾಮ್ರಾಜ್ಯ (ಕ್ರಿ.ಶ 1336 – 1565)
ವಿದ್ಯಾರಣ್ಯರ ಸಹಾಯದಿಂದ ಹಕ್ಕ -ಬುಕ್ಕ ಸಹೋದರರಿಂದ ಸ್ಥಾಪಿತವಾದ ಈ ಸಾಮ್ರಾಜ್ಯವನ್ನು ಹಲವಾರು ಸಂತತಿಯ ರಾಜರು ವೈಭವದಿಂದ ಆಳಿದರು.
ಇವರ ರಾಜಧಾನಿ : ಹಂಪಿ
ತುಳುವ ಸಂತತಿಯ ಕೃಷ್ಣದೇವರಾಯ (1519 – 1529) ವಿಜಯನಗರ ಸಾಮ್ರಾಜ್ಯದ ಅತ್ಯಂತ ಪ್ರಬಲ ಹಾಗೂ ಖ್ಯಾತ ದೊರೆ.
1565 ರ ತಾಳೀಕೋಟೆ ಯುದ್ಧದಿಂದ ವಿಜಯನಗರ ಸಾಮ್ರಾಜ್ಯ ಪತನವಾಯಿತು.
11) ಬಹಮನಿ ಸಾಮ್ರಾಜ್ಯ (ಕ್ರಿ.ಶ 1347 – 1527)
ಈ ಬಹಮನಿ ಸಾಮ್ರಾಜ್ಯದ ಸ್ಥಾಪಕ: ಅಲ್ಲಾವುದ್ದೀನ್ ಹಸನ್ ಬಹಮನ್ ಷಾ.
ಈ ಮುಸ್ಲಿಂ ಸಾಮ್ರಾಜ್ಯದ ರಾಜಧಾನಿಗಳು : ಗುಲ್ಬರ್ಗಾ ಹಾಗೂ ಬೀದರ್.